ರಚನೆ: ಎಂ. ಗೋಪಾಲಕೃಷ್ಣ ಅಡಿಗ
ಗಾಯನ: ರತ್ನಮಾಲಾ ಪ್ರಕಾಶ್, ರಾಜು ಅನಂತಸ್ವಾಮಿ & ಸಂಗೀತ ಕಟ್ಟಿ
ಸಂಗೀತ: ಮನೋಮೂರ್ತಿ
ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು ?
ಯಾವ ಬೃಂದಾವನವು ಸೆಳೆಯಿತು
ನಿನ್ನ ಮಣ್ಣಿನ ಕಣ್ಣನು ? //ಪ//
ಹೂವು ಹಾಸಿಗೆ ಚಂದ್ರ ಚಂದನ,
ಬಾಹು ಬಂಧನ, ಚುಂಬನ ;
ಬಯಕೆ ತೋಟದ ಬೇಲಿಯೊಳಗೆ
ಕರಣಗಳದೀ ರಿಂಗಣ; //೧//
ಸಪ್ತ ಸಾಗರದಾಚೆ ಎಲ್ಲೊ..
ಸುಪ್ತ ಸಾಗರ ಕಾದಿದೆ
ಮೊಳೆಯದೆಲೆಗಳ ಮೂಕ ಮರ್ಮರ
ಇಂದು ಇಲ್ಲಿಗೂ ಹಾಯಿತೆ? //೨//
ವಿವಶವಾಯಿತು ಪ್ರಾಣ - ಹಾ: !!
ಪರವಶವು ನಿನ್ನೀ ಚೇತನ;
ಇರುವುದೆಲ್ಲವ ಬಿಟ್ಟು
ಇರದುದರೆಡೆಗೆ ತುಡಿವುದೇ ಜೀವನ? //೩//
ಯಾವ ಮೋಹನ ಮುರಳಿ ಕರೆಯಿತು
ಇದ್ದಕಿದ್ದಲೇ ನಿನ್ನನು?
ಯಾವ ಬೃಂದಾವನವು ಚಾಚಿತು
ತನ್ನ ಮಿಂಚಿನ ಕೈಯನು? //೪//
ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು....
ಗಾಯನ: ರತ್ನಮಾಲಾ ಪ್ರಕಾಶ್, ರಾಜು ಅನಂತಸ್ವಾಮಿ & ಸಂಗೀತ ಕಟ್ಟಿ
ಸಂಗೀತ: ಮನೋಮೂರ್ತಿ
ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು ?
ಯಾವ ಬೃಂದಾವನವು ಸೆಳೆಯಿತು
ನಿನ್ನ ಮಣ್ಣಿನ ಕಣ್ಣನು ? //ಪ//
ಹೂವು ಹಾಸಿಗೆ ಚಂದ್ರ ಚಂದನ,
ಬಾಹು ಬಂಧನ, ಚುಂಬನ ;
ಬಯಕೆ ತೋಟದ ಬೇಲಿಯೊಳಗೆ
ಕರಣಗಳದೀ ರಿಂಗಣ; //೧//
ಸಪ್ತ ಸಾಗರದಾಚೆ ಎಲ್ಲೊ..
ಸುಪ್ತ ಸಾಗರ ಕಾದಿದೆ
ಮೊಳೆಯದೆಲೆಗಳ ಮೂಕ ಮರ್ಮರ
ಇಂದು ಇಲ್ಲಿಗೂ ಹಾಯಿತೆ? //೨//
ವಿವಶವಾಯಿತು ಪ್ರಾಣ - ಹಾ: !!
ಪರವಶವು ನಿನ್ನೀ ಚೇತನ;
ಇರುವುದೆಲ್ಲವ ಬಿಟ್ಟು
ಇರದುದರೆಡೆಗೆ ತುಡಿವುದೇ ಜೀವನ? //೩//
ಯಾವ ಮೋಹನ ಮುರಳಿ ಕರೆಯಿತು
ಇದ್ದಕಿದ್ದಲೇ ನಿನ್ನನು?
ಯಾವ ಬೃಂದಾವನವು ಚಾಚಿತು
ತನ್ನ ಮಿಂಚಿನ ಕೈಯನು? //೪//
ಯಾವ ಮೋಹನ ಮುರಳಿ ಕರೆಯಿತು
ದೂರ ತೀರಕೆ ನಿನ್ನನು....
No comments:
Post a Comment