
ಗಾಯಕರು: ಪಿ.ಬಿ. ಶ್ರೀನಿವಾಸ್
ರಚನೆ: ಚಿ.ಉದಯಶಂಕರ್
ಸಂಗೀತ: ರಾಜನ್ ನಾಗೇಂದ್ರ
ನಿರ್ದೇಶನ: ಎಸ್. ಸಿದ್ದಲಿಂಗಯ್ಯ
ನಟರು: ಡಾ. ರಾಜಕುಮಾರ್, ಬಿ ಸರೋಜಾದೇವಿ
ಆಕಾಶವೇ ಬೀಳಲಿ ಮೇಲೆ
ನಾನೆಂದು ನಿನ್ನವನು
ಭೂಮಿಯೇ ಬಾಯ್ ಬಿಡಲಿ ಇಲ್ಲೇ
ನಾನಿನ್ನ ಕೈ ಬಿಡೆನು
ನೀನಿರುವುದೇ ನನಗಾಗಿ
ಈ ಜೀವ ನಿನಗಾಗಿ
ಹೆದರಿಕೆಯ ನೋಟವೇಕೆ ಒಡನಾಡಿ ನಾನಿರುವೆ
ಹೊಸ ಬಾಳಿನ ಹಾದಿಯಲ್ಲಿ ಜೊತೆಗೂಡಿ ನಾ ಬರುವೆ
ಕಲ್ಲಿರಲಿ ಮುಳ್ಳೇ ಇರಲಿ ನಾ ಮೊದಲು ಮುನ್ನಡೆವೆ
ನೀನಡಿಯ ಇಡುವೆಡೆಯೇ ಒಲವಿನ ಹೂಹಾಸುವೆ
ಈ ಮಾತಿಗೆ ಮನವೇ ಸಾಕ್ಷಿ ಈ ಭಾಷೆಗೆ ದೇವರೇ ಸಾಕ್ಷಿ
ಇನ್ನಾದರೂ ನನ್ನ ನಂಬಿ ನಗೆಯ ಚೆಲ್ಲು ಚೆಲುವೆ
ಆಕಾಶವೇ ಬೀಳಲಿ ಮೇಲೆ ನಾನೆಂದು ನಿನ್ನವನು
ಹಸೆಮಣೆಯು ನಮಗೆ ಇಂದು ನಾವು ನಿಂತ ತಾಣವು
ತೂಗಾಡುವ ಹಸಿರೆಲೆಯೇ ಶುಭ ಕೋರುವ ತೋರಣವು
ಹಕ್ಕಿಗಳ ಚಿಲಿಪಿಲಿ ಗಾನ ಮಂಗಳಕರ ನಾದವು
ಈ ನದಿಯ ಕಲರವವೇ ಮಂತ್ರಗಳ ಘೋಷವು
ಸಪ್ತಪದಿ ಈ ನಡೆಯಾಯ್ತು ಸಂಜೆರಂಗು ಆರತಿಯಾಯ್ತು
ಇನ್ನ್ನೀಗ ಎರಡೂ ಜೀವ ಬೆರೆತು ಸ್ವರ್ಗವಾಯ್ತು
ಆಕಾಶವೇ ಬೀಳಲಿ ಮೇಲೆ ನಾನೆಂದು ನಿನ್ನವನು
No comments:
Post a Comment