ಸಾಹಿತ್ಯ: ದೊಡ್ಡ ರಂಗೇಗೌಡ
ಸಂಗೀತ: ಎಸ್. ಅಶ್ವಥ್, ಎಲ್. ವೈದ್ಯನಾಥನ್
ಗಾಯನ: ಎಸ್ ಪಿ ಬಾಲು
ನಿರ್ದೇಶನ: ಮೋಹನ್ ಕುಮಾರ್
ನಟರು: ಸುರೇಶ ಹೆಬ್ಳಿಕರ್, ರೂಪ ಚಕ್ರವರ್ತಿ
ನಮ್ಮೂರ ಮಂದಾರ ಹೂವೆ
ನನ್ನೊಲುಮೆ ಬಾಂದಳದ ಚೆಲುವೆ
ಬಳಿ ಬಂದು ಬಾಳನ್ನು ಬೆಳಗು
ನನ್ನ ಬರಿದಾದ ಮನದಲ್ಲಿ ಮಿನುಗು
ಕಣ್ಣಲ್ಲೇ ಕರೆದು ಹೊಂಗನಸ ತೆರೆದು
ಸಂಗಾತಿ ಸಂಪ್ರೀತಿ ಸೆಳೆದೆ
ಅನುರಾಗ ಹೊಳೆದು ಅನುಬಂಧ ಬೆಳೆದು
ಸಮ್ಮೋಹ ಸಂಬಂಧ ಮಿಡಿದೆ
ಮೂಡಿದ ಪ್ರೇಮದ ಸೊಗಸಾದ ಕಾರಂಜಿ ಬಿರಿದೆ,
ಸೊಗಸಾದ ಕಾರಂಜಿ ಬಿರಿದೆ.......
ಒಡಲಾಳ ಮೊರೆದು ಒಡನಾಟ ಮೆರೆದು
ಒಡನಾಡಿ ಬಾಂಧವ್ಯ ಕಂಡೆ
ಋತುಮಾನ ಮೀರಿ ಹೊಸಗಾನ ತೋರಿ
ಹಿತವಾದ ಮಾಧುರ್ಯ ಮಿಂದೆ
ತೀರದ ಮೋಹದ ಇನಿದಾದ ಆನಂದ ತಂದೆ,
ಇನಿದಾದ ಆನಂದ ತಂದೆ.......
No comments:
Post a Comment